ಹೆಚ್ ಎಂ ಎಸ್ ಶಾಲೆಯ ಬಳಿ ಬರ್ಬರ ಕೊಲೆ..?

ತುಮಕೂರು: ನಗರದ ಸಿರಾಗೇಟ್ ಬಳಿ ಇರುವ ಹೆಚ್ ಎಂಎಸ್ ಶಾಲೆ ಹತ್ತಿರ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ..? ಮಾಡಿರುವ ಘಟನೆ ಬೆಳೆಕಿಗೆ ಬಂದಿದೆ.


ಕೊಲೆಯಾಗಿರುವ ವ್ಯಕ್ತಿಯನ್ನು ಗ್ಯಾಸ್ ವಿಜಯ್ ಎಂದು ಗುರುತಿಸಲಾಗಿದ್ದು, ಅರಳೀಮರದ ಪಾಳ್ಯದ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕೆ ತುಮಕೂರು ನಗರ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ದಿನೇಶ್, ಸಬ್ ಇನ್ ಸ್ಪೆಕ್ಟರ್ ಮಂಜುಳಾ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಶ್ವಾನದಳ ಭೇಟಿ ನೀಡಿ ಪರಿಶೀಲಿಸಬೇಕಿದೆ

Verified by MonsterInsights