ಗ್ಯಾರೆಂಟಿ ಜಾರಿ ಮಾಧ್ಯಮಗಳಿಗೆ ಆತುರ: ಜಮೀರ್ ಅಹಮದ್

ತುಮಕೂರು: ಗ್ಯಾರೆಂಟಿ ಯೋಜನೆ ಜಾರಿ ವಿಚಾರದಲ್ಲಿ ಮಾಧ್ಯಮವರು ಯಾಕಿಷ್ಟು ಆತುರಪಡುತ್ತೀರಾ ಎಂದು ಸಚಿವ ಜಮೀರ್ ಅಹಮದ್ ಪ್ರಶ್ನಿಸಿದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದು ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದು ಇನ್ನು 8-10 ದಿನಗಳಾಗಿವೆ ಅಷ್ಟೆ. ದಯವಿಟ್ಟು ತಾಳ್ಮೆಯಿಂದ ಇರಿ, ಶೀಘ್ರದಲ್ಲೇ ಜಾರಿಗೆ ಬರಲಿವೆ ಎಂದರು.
ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗಾಗಲೇ ಮೊದಲ ಸಚಿವ ಸಂಪುಟದಲ್ಲೇ ಈ ಗ್ಯಾರೆಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ಆದಷ್ಟು ಬೇಗ ಮುಖ್ಯಮಂತ್ರಿಗಳು ಈ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು.

ಸಿದ್ದಗಂಗಾ ಮಠದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 10 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಈ ಆದೇಶವನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆಯಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ನನ್ನ ಜತೆ ಶ್ರೀಗಳು ಚರ್ಚಿಸಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಅಗತ್ಯ ಕಟ್ಟಡ ವ್ಯವಸ್ಥೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕರಂಗಿ, ಎಇಇ ಮಹಲಿಂಗಪ್ಪ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಲೀಮ್ ಮತ್ತಿತರರು ಉಪಸ್ಥಿತರಿದ್ದರು.

Verified by MonsterInsights