ರೋಹಿತ್ ಮಾಧ್ಯಮ ಪ್ರಶಸ್ತಿಗೆ ಜಗನ್ನಾಥ ಕಾಳೇನಹಳ್ಳಿ ಆಯ್ಕೆ

ಬೆಂಗಳೂರು: ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿ ಅಕಾಲ ಮರಣಕ್ಕೆ ತುತ್ತಾದ ರೋಹಿತ್ ಅವರ ಹೆಸರಿನಲ್ಲಿ ಐಎಂಎಸ್ಆರ್ ನಿಡುವ ರೋಹಿತ್ ಮಾಧ್ಯಮ ಪ್ರಶಸ್ತಿಗೆ ವಿಜಯವಾಣಿ ಜಿಲ್ಲಾ ವರದಿಗಾರ ಜಗನ್ನಾಥ ಕಾಳೇನಹಳ್ಳಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯೂ 5 ಸಾವಿರ ರೂ. ನಗದು ಮತ್ತು ಫಲಕ ನೀಡಿ ಗೌರವಿಸಲಾಗುವುದು, ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 31 ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫಾದರ್ ಡಾ.ಅಗಸ್ತೀನ್ ಜಾರ್ಜ್, ಮುಖ್ಯ ಅತಿಥಿಯಾಗಿ ಟೈಮ್ಸ್ ಆಫ್ ಇಂಡಿಯಾ ಸ್ಥಾನಿಕ ಸಂಪಾದಕರಾದಶ್ರೀ ಆಶಾ ರೈ ಭಾಗವಹಿಸುವರು. ರೋಹಿತ್ ಅವರ ತಂದೆ ರಾಜಣ್ಣ ಪ್ರಶಸ್ತಿ ಪ್ರದಾನ ಮಾಡುವರು.

ಎಲ್ಲರೂ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಿ ಬೆಂಗಳೂರಿಗೆ ಬರಲು ಬಯಸಿದರೆ, ಇವರು ಬೆಂಗಳೂರಿನಲ್ಲಿ ಕೆಲಸ ಮಾಡಿ ತುಮಕೂರು ಜಿಲ್ಲಾ ವರದಿಗಾರರಾಗಿ ವಿಜಯವಾಣಿ ಪತ್ರಿಕೆಗೆ ಕೆಲಸ ಮಾಡುತ್ತಿರುವ ಜಗನ್ನಾಥ್ ಕಾಳೇನಹಳ್ಳಿ ಎಲೆಕ್ಟ್ರಾನಿಕ್ ಮಾಧ್ಯಮದ ಅನುಭವ ಹೊಂದಿರುವ ಇವರು ಗ್ರಾಮೀಣ ಪತ್ರಿಕೋದ್ಯಮದಲ್ಲಿ ಎತ್ತಿದ ಕೈ.

ಐಎಂಎಸ್ಆರ್: ಭಾರತೀಯ ಮಾಧ್ಯಮ ರಂಗದಲ್ಲಿ ಹಲವು ಬದಲಾವಣೆಗಳು ಬರುತ್ತಿದ್ದು, ಅದಕ್ಕೆ ಯುವ ಪೀಳಿಗೆ ತೆರೆದುಕೊಳ್ಳಬೇಕಿದೆ. ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಪತ್ರಕರ್ತರು ಮತ್ತು ಮಾಧ್ಯಮ ಶಿಕ್ಷಣದಲ್ಲಿ ನಿರತರಾದವರು ಸೇರಿ ಈ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ರೋಹಿತ್ ಹೆಸರಿನಲ್ಲಿ ಮಾಧ್ಯಮ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಪ್ರತಿ ವರ್ಷ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ.

Verified by MonsterInsights