ಕಾಂಗ್ರೆಸ್ ಮಹಿಳೆಯರನ್ನು ಗೃಹಲಕ್ಷ್ಮೀಯರನ್ನಾಗಿಸಿದೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಲೈಂಗಿಕ ಅಲ್ಪಸಂಖ್ಯಾತರು ಗೃಹ ಲಕ್ಷ್ಮೀ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ, ಗೃಹ ಲಕ್ಷ್ಮೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡಲಿದ್ದು, 30 ಸಾವಿರ ಕೋಟಿ ವೆಚ್ಚದಲ್ಲಿ ಗೃಹಲಕ್ಷ್ಮೀ ಯೋಜನೆ ಪ್ರಾರಂಭಿಸಲಾಗುವುದು ಎಂದರು.
* ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿನ ರೇಷ್ಮೆ ಮಾರುಕಟ್ಟೆಯನ್ನು ಹೈಟೆಕ್ ಗೊಳಿಸಲು 75 ಕೋಟಿ ಅನುದಾನ ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
* ಚರ್ಮಗಂಟು, ಪಶು ಆಹಾರದ ಬೆಲೆ ಏರಿಕೆಯಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ, ಹಾಲು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದ್ದು, ಚರ್ಮಗಂಟು ರೋಗದಿಂದ ಸಾವನ್ನಪ್ಪಿದ ಜಾನುವಾರುಗಳಿಗೆ 53 ಕೋಟಿ ಪರಿಹಾರವನ್ನು ನೀಡಲಾಗಿದ್ದು, ಬಾಕಿ ಉಳಿದಿರುವ 12 ಕೋಟಿ ಅನುದಾನವನ್ನು ನೀಡಲಾಗುವುದು ಎಂದರು.
* ರಾಜ್ಯದ ರೈತರ ಅಲ್ಪಾವಧಿ ಸಾಲ, ದೀರ್ಘಾವಧಿ ಸಾಲ ಹೆಚ್ಚಳ, ಪ್ರಸಕ್ತ ಆರ್ಥಿಕ ವರ್ಷದಲ್ಲಿ 25 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದೆ.
* 23252 ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆ ಪೂರ್ಣಗೊಳಿಸಲು ಆದ್ಯತೆ, ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಪ್ರಾರಂಭಿಸಲು ಕ್ರಮ, ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಅನುಮೋದನೆಗೊಂಡಿಲ್ಲ, ಘೋಷಣೆಯಾದ ಅನುದಾನವೂ ಬಿಡುಗಡೆಗೊಂಡಿಲ್ಲ ಎಂದರು.
* ಎಸ್ಸಿಪಿ/ಟಿಎಸ್ಪಿ ಯೋಜನೆಯ ಸೆಕ್ಷನ್ ಡಿ ಕೈಬಿಡಲಾಗುವುದು, ಕ್ರೈಸ್ ಶಾಲೆಗಳನ್ನು ಆಧುನೀಕರಣಗೊಳಿಸಲಾಗುವುದು, ಪರಿಶಿಷ್ಟ ಸಮುದಾಯಕ್ಕೆ ಭರ್ಜರಿ ಅನುದಾನ ನೀಡಿದ ಸಿದ್ದರಾಮಯ್ಯ.
* ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಗೆ 2 ಕೋಟಿ, * ಟ್ಯಾಕ್ಸಿ ಖರೀದಿ ಯೋಜನೆಗೆ 4 ಲಕ್ಷ ಸಹಾಯ
* ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕತ ತರಬೇತಿ
* ಚರ್ಮ ಆಧಾರಿತ ಉದ್ಯಮ ಉತ್ತೇಜನಕ್ಕೆ ತರಬೇತಿ
* ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಸಬಲೀಕರಣ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ.
ಸಾಮಾಜಿಕ ನ್ಯಾಯ ರಾಜಕೀಯ ಅಸ್ತ್ರವಲ್ಲ
* ನಾಲ್ಕು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಡೆಗಣನೆ, ವಿದ್ಯಾರ್ಥಿಗಳಿಗಾಗಿ ನೀಡಿದ್ದ ಅರಿವು, ವಿದ್ಯಾಸಿರಿ ಯೋಜನೆ ಪುನಾರಂಭಗೊಳಿಸಲಾಗುವುದು.
* ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ದೊರೆಯಲಿದೆ.
* ವಿದೇಶಿ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷ ಸಹಾಯಧನ.
* ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಕಿಟ್ ವಿತರಣೆ, ಹಾಸ್ಟೆಲ್ ಬಲವರ್ಧನೆಗೆ ಕ್ರಮ
* ಸ್ವಯಂ ಉದ್ಯೋಗಕ್ಕೆ ಶೇ.50ರಷ್ಟು ಸಹಾಯಧನ ಘೋಷಣೆ
* ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ 2 ಕೋಟಿ ಅನುದಾನ
* ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 62 ಕೋಟಿ ವಿದ್ಯಾರ್ಥಿ ವೇತನ, ವಸತಿ ಶಾಲೆಗಳಿಗೆ 30 ಕೋಟಿ ಅನುದಾನ, ಮೊರಾರ್ಜಿ ದೇಸಾಯಿ ಶಾಲೆಗಳ ದಾಖಲಾತಿ ದ್ವಿಗುಣಗೊಳಿಸಲಾಗುವುದು.
* ಮೌಲಾನ ಆಜಾದ್ ಶಾಲೆಗಳ ಗುಣಮಟ್ಟ ಒದಗಿಸಲಾಗುವುದು.
* ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.2 ಬಡ್ಡಿದರದಲ್ಲಿ ಒಂದು ಲಕ್ಷ ಸಾಲ ಸೌಲಭ್ಯ
* ಕನ್ನಡ ಮತ್ತು ಆಂಗ್ಲ ಭಾಷಾ ಪ್ರಯೋಗಾಲಯ ಸ್ಥಾಪನೆಗೆ 5 ಕೋಟಿ ಅನುದಾನ
* ಐಎಎಸ್/ಕೆಎ ಎಸ್ ತರಬೇತಿ
* ವಿದೇಶಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗಕ್ಕೆ 20 ಲಕ್ಷ ಸಹಾಯಧನ
* ಶಾದಿ ಮಹಲ್ ಮತ್ತು ಸಮುದಾಯ ಭವನವನ್ನು 54 ಕೋಟಿ ವೆಚ್ಚದಲ್ಲಿ ಪೂರ್ಣ ಗೊಳಿಸಲಾಗುವುದು.
* ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ 100 ಕೋಟಿ ಅನುದಾನ